Posts

ಸಂಪಿಗೆ ಯುವಮಿಲನ್ - 2024

Image
ಸಂಪಿಗೆ ಯುವಮಿಲನ್ - 2024 ಪವಿತ್ರಾತ್ಮರ ದೇವಾಲಯ, ಸಂಪಿಗೆ ಮತ್ತು ಐ.ಸಿ.ವೈ.ಎಮ್. ಸಂಪಿಗೆ ಘಟಕ ಇದರ ಸಹಯೋಗದೊಂದಿಗೆ  "ಸಂಪಿಗೆ ಯುವ ಮಿಲನ್ 2024" ನ್ನು ಭಾನುವಾರ, ಆಗಸ್ಟ್‌ 4, 2024 ರಂದು ಸಂಪಿಗೆ ಸಭಾ ಭವನದಲ್ಲಿ ಆಯೋಜಿಸಿತು.  ಕಾರ್ಯಕ್ರಮವು ಬೆಳಿಗ್ಗೆ 10:00 ಗಂಟೆಗೆ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಐ.ಸಿ.ವೈ.ಎಮ್. ಕೇಂದ್ರೀಯ ಸಮಿತಿಯ ನಿರ್ದೇಶಕರಾದ ವಂದನೀಯ ಫಾದರ್ ಅಶ್ವಿನ್ ಕಾರ್ಡೋಜಾ, ಸಂಪಿಗೆ ಚರ್ಚ್'ನ ಧರ್ಮ ಗುರುಗಳಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜಾ, ಐ.ಸಿ.ವೈ.ಎಮ್. ಕೇಂದ್ರೀಯ ಸಮಿತಿಯ ಕೋಶಾಧಿಕಾರಿಯಾದ ರೀನಾ ಕ್ರಾಸ್ತಾ, ಐ.ಸಿ.ವೈ.ಎಮ್. ಮೂಡಬಿದ್ರಿ ವಲಯದ ಅಧ್ಯಕ್ಷರಾದ ಜೆವಿನ್ ಡಿಸೋಜಾ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ವಿಲ್ಫ್ರೇಡ್ ಮಿಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಐ.ಸಿ.ವೈ.ಎಮ್. ಸಂಪಿಗೆ ಘಟಕದ ಅಧ್ಯಕ್ಷ ಮೆಲ್ರೋಯ್ ಮೋರಾಸ್, ಐ.ಸಿ.ವೈ.ಎಮ್. ಸಂಪಿಗೆ ಘಟಕದ ಸಚೇತಕರಾದ ವಿಪಿನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಐ.ಸಿ.ವೈ.ಎಮ್. ಸಂಪಿಗೆ ಘಟಕದ ಉಪಾಧ್ಯಕ್ಷೆ ಜೋಯ್ಲಿನ್ ಕೊರ್ಡೆರೋ ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು ಐ.ಸಿ.ವೈ.ಎಮ್. ಸಂಪಿಗೆ ಘಟಕದ ಸಾಂಸ್ಕ್ರತಿಕ ಕಾರ್ಯದರ್ಶಿ ನೀಶಲ್ ಡಿಸಿಲ್ವ ಕಾರ್ಯಕ್ರಮವನ್ನು ನಿರೂಪಿಸಿ ವಂದನೆ ಸಲ್ಲಿಸಿದರು. 50 ಕ್ಕೂ ಹೆಚ್ಚು ಉತ್ಸಾಹಿ ಯುವಜನರನ್ನು ಸೆಳೆಯುವ ಮೂಲಕ "ಸಂಪಿಗೆ ಯು...

ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ

Image
  ಕಥೊಲಿಕ್ ಸಭಾ (ರಿ) ಸಂಪಿಗೆ ಘಟಕದ ವತಿಯಿಂದ ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ ದಿನಾಂಕ 17/07/2024 ರಂದು ಸಂಪಿಗೆ ಚರ್ಚ್ ವತಿಯಿಂದ ನಡೆಯಿತು. ಪುತ್ತಿಗೆ, ಕಲ್ಲಮುಂಡ್ಕೂರು, ತೆಂಕಮಿಜಾರು ಹಾಗೂ ಬಡಗಮಿಜಾರು ಗ್ರಾಮದ ಗ್ರಾಮಸ್ಥರು ಇದರ ಸದುಪಯೋಗವನ್ನು ಪಡೆದುಕೊಂಡರು. ಪುತ್ತಿಗೆ ಗ್ರಾಮದ ಗ್ರಯ ಸಹಾಯಕರಾದ ಕೇಶವ, ಬಡಗಮಿಜಾರು ಗ್ರಾಮದ ಚಂದ್ರು ದೇವಾಡಿಗ, ತೆಂಕಮಿಜಾರು ಗ್ರಾಮದ ಹರ್ಷಿತಾ ಮತ್ತು ಕಲ್ಲಮುಂಡ್ಕೂರು ಗ್ರಾಮದ ಗ್ರಾಮ ಸಹಾಯಕರಾದ ತೋಮಸ್ ಕರ್ಡೋಜ ಇವರು ಹಾಜರಿದ್ದರು. ಇವರನ್ನು ಕಥೊಲಿಕ್ ಸಭಾ (ರಿ) ಸಂಪಿಗೆ ಘಟಕದ ವತಿಯಿಂದ ಸನ್ಮಿನಿಸಲಾಯಿತು.

ಪಾವ್ಸಾ ಗಮ್ಮತ್ತ್ - 2024

Image
ಐ.ಸಿ.ವೈ.ಎಮ್. ಸಂಪಿಗೆ ಘಟಕದ ವತಿಯಿಂದ ‘ಪಾವ್ಸಾ ಗಮ್ಮತ್ತ್’ ಎಂಬ ಮಳೆಗಾಲದ ಆಹಾರ ಪದಾರ್ಥಗಳ ವಿಶಿಷ್ಟ ಕಾರ್ಯಕ್ರಮ  ಐ.ಸಿ.ವೈ.ಎಮ್. ಸಂಪಿಗೆ ಘಟಕದ ವತಿಯಿಂದ ‘ಪಾವ್ಸಾ ಗಮ್ಮತ್ತ್’ ಎಂಬ ಕಾರ್ಯಕ್ರಮವನ್ನು ಹೋಲಿ ಸ್ಪಿರಿಟ್ ಚರ್ಚ್ ಸಂಪಿಗೆ ಇಲ್ಲಿನ ಸಭಾಂಗಣದಲ್ಲಿ ಜುಲೈ 21, 2024 ರಂದು ಮಧ್ಯಾಹ್ನ 12 ಗಂಟೆಗೆ ಅಧ್ಬುತವಾಗಿ ಆಯೋಜಿಸಲಾಗಿತು. ಮುಖ್ಯ ಅತಿಥಿಗಳನ್ನು ಐ.ಸಿ.ವೈ.ಎಮ್. ಸಂಪಿಗೆ ಘಟಕದ ಅಧ್ಯಕ್ಷ ಮೆಲ್ರೋಯ್ ಮೋರಾಸ್ ವೇದಿಕೆಗೆ ಕರೆದೊಯ್ದರು.  ವೇದಿಕೆಯಲ್ಲಿ ಸಂಪಿಗೆ ಚರ್ಚ್'ನ ಧರ್ಮ ಗುರುಗಳಾದ ವಂದನೀಯ ಸ್ವಾಮಿ ವಿನ್ಸೆಂಟ್ ಡಿಸೋಜಾ, ಐ.ಸಿ.ವೈ.ಎಮ್. ಮೂಡಬಿದ್ರಿ ವಲಯದ ಉಪಾಧ್ಯಕ್ಷರಾದ ರೊಲ್ಸನ್ ರೊಡ್ರಿಗಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ವಿಲ್ಫ್ರೇಡ್ ಮಿಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಐ.ಸಿ.ವೈ.ಎಮ್. ಸಂಪಿಗೆ ಘಟಕದ ಅಧ್ಯಕ್ಷ ಮೆಲ್ರೋಯ್ ಮೋರಾಸ್, ಐ.ಸಿ.ವೈ.ಎಮ್. ಸಂಪಿಗೆ ಘಟಕದ ಸಚೇತಕರಾದ ವಿಪಿನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಐ.ಸಿ.ವೈ.ಎಮ್. ಸಂಪಿಗೆ ಘಟಕದ ಉಪಾಧ್ಯಕ್ಷೆ ಜೋಯ್ಲಿನ್ ಕೊರ್ಡೆರೋ ಮತ್ತು ಪಂಗಡದಿಂದ ಪ್ರಾರ್ಥನಾ ಗೀತೆಯ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಐ.ಸಿ.ವೈ.ಎಮ್. ಸಂಪಿಗೆ ಘಟಕದ ಖಜಾಂಜಿ ಕ್ಲೇರಿ ಫೆರ್ನಾಂಡಿಸ್ ಅತಿಥಿಗಳನ್ನು ಸ್ವಾಗತಿಸಿದರು ಧರ್ಮ ಗುರುಗಳು ಪಾವ್ಸಾ ಗಮ್ಮತ್ತ್ ಮತ್ತು ಅದಕ್ಕೆ ಸಂಬಂಧಿಸಿದ ಸಂಪ್ರದಾಯದ ಮಹತ್ವದ ಬಗ್ಗೆ ಮಾತನಾಡಿ ಇಂತಹ ವಿಶಿಷ್ಟ ಮತ್ತು...